Connect with us
Ad Widget

ಮನರಂಜನೆ

ಮತ್ತೆ ಕಿರಿಕ್ ಮಾಡಲ್ಲ ಎಂದ ನಟಿ ರಶ್ಮಿಕಾ ಮಂದಣ್ಣ

Published

on

ಬೆಂಗಳೂರು : ಕಿರಿಕ್​ ಪಾರ್ಟಿ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕೊಡಗಿನ ​ ಬೆಡಗಿ ರಶ್ಮಿಕಾ ಮಂದಣ್ಣ ಈಗ ನ್ಯಾಶನಲ್​ ಕ್ರಶ್​. ಸದಾ ಒಂದಲ್ಲ ಒಂದು ವಿಚಾರದಿಂದ ಮುಖ್ಯಭೂಮಿಕೆಯಲ್ಲಿರುವ ರಶ್ಮೀಕಾ ಇದೀಗ ಮತ್ತೆ ಕಿರಿಕ್​ ಮಾಡಲ್ಲ ಅಂತ ಸುದ್ದಿಯಾಗಿದ್ದಾರೆ.

ಸಾನ್ವಿ ಪಾತ್ರದ ಮೂಲಕ ಯುವಕರ ನಿದ್ದೆ ಗೆಡಿಸಿದ್ದ ರಶ್ಮಿಕಾಗೆ, ಕಿರಿಕ್​ ಪಾರ್ಟಿ ನಂತ್ರ ಆಫರ್​ಗಳ ಸುರಿಮಳೆನೇ ಹರಿದು ಬಂತು. ಒಂದಾದ ಮೇಲೊಂದು ಹಿಟ್ ಸಿನಿಮಾ ಕೊಟ್ಟು ಅಭಿಮಾನಿಗಳನ್ನು ರಂಜಿಸಿದ ರಶ್ಮಿಕಾ ಕರ್ನಾಟಕ ಕ್ರಶ್​ನಿಂದ ನ್ಯಾಶನಲ್​ ಕ್ರಶ್ ಪಟ್ಟ ಗಳಿಸಿಕೊಂಡ್ರು. ಟಾಲಿವುಡ್, ಕಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಕಾಲ್​ ಶೀಟ್​​ಗೆ ಅನೇಕ ನಿರ್ದೇಶಕರು ಕೂಡ ಕಾಯಬೇಕಾಯ್ತು. ಈಗಾಗಲೇ ಬಾಲಿವುಡ್​ಗೆ ಎಂಟ್ರಿ ಕೊಟ್ಟಿರುವ ರಶ್ಮಿಕಾ ಕಿರಿಕ್ ಪಾರ್ಟಿ ಸಿನಿಮಾದ ಹಿಂದಿ ರಿಮೇಕ್ನಲ್ಲಿ ನಟಿಸುವುದಿಲ್ಲ ಅಂತ ಹೇಳಿದ್ದಾರೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಮನರಂಜನೆ

ಬಾಲಿವುಡ್ ನಟಿ ಹುಟ್ಟುಹಬ್ಬಕ್ಕೆ ಶುಭಕೋರಿ ಬೃಹತ್ ಫ್ಲೆಕ್ಸ್ : ಅಭಿಮಾನಕ್ಕೆ ಸಂತಸ ವ್ಯಕ್ತಪಡಿಸಿದ ಸನ್ನಿ ಲಿಯೋನ್

Published

on

ಮಂಡ್ಯ: ಮೇ 13 ರಂದು ಖ್ಯಾತ ಬಾಲಿವುಡ್ ನಟಿ, ಮಾಜಿ ನೀಲಿ ತಾರೆ ಸನ್ನಿ ಲಿಯೋನ್ 40ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ದೇಶದಾದ್ಯಂತ ಶುಭಾಶಯ ಕೋರಿದ್ದರು. ಅದರಲ್ಲೂ ಕರ್ನಾಟಕದಲ್ಲಿ ಈ ಬಾರಿ ಸನ್ನಿಗೆ ಅಭಿಮಾನಿಗಳು ಶುಭಾಶಯ ಕೋರಿದ ರೀತಿ ಸ್ವಲ್ಪ ಭಿನ್ನವಾಗಿದ್ದು, ಈ ಬಗ್ಗೆ ಸ್ವತಃ ಸನ್ನಿ ಲಿಯೋನ್ ಕೂಡ ಸಂತಸ ವ್ಯಕ್ತಪಡಿಸಿದ್ದರು.

ವಿಶಾಲವಾದ ಅಭಿಮಾನಿ ಬಳಗವನ್ನು ಹೊಂದಿರುವ ಸನ್ನಿ ಲಿಯೋನ್​ಗೆ ಹಳ್ಳಿಯೊಂದರಲ್ಲಿ ಫ್ಲೆಕ್ಸ್ ಹಾಕಿಸಿ ಅದರ ಮೇಲೆ ಅನಾಥ ಮಕ್ಕಳ ತಾಯಿ, ಅಭಿಮಾನಿಗಳ‌ ದೇವತೆ ಎಂದು ಬರೆದು ಶುಭಕೋರಿ ಹಾಕಿದ್ದರು. ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಕೂಡ ಆಗಿತ್ತು ಮತ್ತು ಇದೇ ಫೋಟೋವನ್ನು ಸನ್ನಿ ಲಿಯೋನ್ ತಮ್ಮ ಇನ್ಸ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿ ಕರ್ನಾಟಕದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು.
ಆದರೆ ಇದು ಯಾವ ಹಳ್ಳಿಯಲ್ಲಿನ ಫೋಟೊ ಎಂದು ಯಾರಿಗೂ ತಿಳಿದಿರಲಿಲ್ಲ ಸದ್ಯ ಸನ್ನಿ ಲಿಯೋನ್​ಗೆ ಶುಭಕೋರಿ ಹಾಕಿದ ಈ ಫ್ಲೆಕ್ಸ್ ಸಕ್ಕರೆನಾಡು ಮಂಡ್ಯದ್ದು ಎಂದು ಗೊತ್ತಾಗಿದೆ. ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಯುವಕರ ತಂಡವೊಂದು ಮೇ 13 ರಂದು ತಮ್ಮೂರಿನಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್​ಗೆ ಶುಭಕೋರಿ ಬೃಹತ್ ಫ್ಲೆಕ್ಸ್ ಹಾಕಿ ಕೇಕ್ ಕಟ್ ಮಾಡಿರುವುದರ ಜೊತೆಗೆ ನೆರೆದಿದ್ದವರಿಗೆ ಬಿರಿಯಾನಿ ಕೂಡ ಹಂಚಿದ್ದರು ಎಂದು ಮೂಲಗಳು ತಿಳಿಸಿವೆ.

Continue Reading

ಮನರಂಜನೆ

ಡ್ರಗ್ಸ್ ಕೇಸ್ ನಿಂದ ಹೊರಬಂದ ನಟಿ ಮೇಲೆ ಮತ್ತೊಂದು ಎಫ್ ಐ ಆರ್

Published

on

ಬೆಂಗಳೂರು : ಸ್ಯಾಂಡಲ್​ವುಡ್​ ಡ್ರಗ್​ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಜೈಲು ಸೇರಿದ್ದರು. ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಅವರು ಜೈಲಿನಿಂದ ಹೊರ ಬಂದಿದ್ದರು. ಕೊವಿಡ್​ ಸಂದರ್ಭದಲ್ಲಿ ಅವರು ಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಈ ಮಧ್ಯೆ, ಸಂಜನಾ ವಿರುದ್ಧ ಮತ್ತೊಂದು ಎಫ್​ಐಆರ್​ ದಾಖಲಾಗಿದೆ. ಇದರಿಂದ ಅವರು ಮತ್ತೆ ಸಂಕಷ್ಟಕ್ಕೆ ತುತ್ತಾಗುವ ಸಾಧ್ಯತೆ ಇದೆ.

ಸಂಜನಾ ಡ್ರಗ್​ ಕೇಸ್​ನಲ್ಲಿ ಬೇಲ್​ ಪಡೆದು ಹೊರ ಬಂದಿದ್ದಾರೆ. ಹೀಗಿರುವಾಗಲೇ ಹಳೆಯ ಕೇಸ್​ ಒಂದಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಮಾಡೆಲ್ ವಂದನಾ ಜೈನ್ ನೀಡಿದ ದೂರಿನ್ವಯ ಕಬ್ಬನ್ ಪಾರ್ಕ್ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಏನಿದು ಪ್ರಕರಣ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

2019ರಲ್ಲಿ ಲಾವೆಲಿ ರಸ್ತೆಯ ಕ್ಲಬ್​ಒಂದಕ್ಕೆ ವಂದನಾ ತೆರಳಿದ್ದರು.
ಅದೇ ಕ್ಲಬ್​ನಲ್ಲಿ ನಟಿ ಸಂಜನಾ ಗಲ್ರಾನಿ ಕೂಡ ಇದ್ದರು. ಆಗ ಸಂಜನಾ ಅವರು ವಂದನಾ ಜೈನ್ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು ಎನ್ನಲಾಗಿದೆ.

ಅವಾಚ್ಯ ಶಬ್ದಗಳನ್ನು ಬಳಸದಂತೆ ವಂದನಾ ಜೈನ್ ಸೂಚನೆ ನೀಡಿದ್ದರು. ಈ ವೇಳೆ ವಂದನಾ ಮುಖಕ್ಕೆ ವಿಸ್ಕಿ ಎರಚಿದ ಸಂಜನಾ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಇದೆ. ಈ ಘಟನೆ ವೇಳೆ ವಂದನಾ ಕಣ್ಣಿಗೆ ಗಾಯ ಆಗಿತ್ತು. ಘಟನೆ ಬಳಿಕ ವಂದನಾಗೆ ಸಂಜನಾ ಬೆದರಿಕೆ ಹಾಕಿದ್ದರಂತೆ.

ಈ ಪ್ರಕರಣದ ಬಗ್ಗೆ ವಂದನಾ ಕೋರ್ಟ್​ನಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್​ ನಿರ್ದೇಶನದಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕೊರೊನಾ

ಚಿತ್ರರಂಗದ ಕಾರ್ಮಿಕರಿಗೆ ರಿಯಲ್ ಸ್ಟಾರ್ ಉಪೇಂದ್ರ ನೆರವು

Published

on

ಬೆಂಗಳೂರು: ಚಿತ್ರೀಕರಣವಿಲ್ಲದೇ ಕಾರ್ಮಿಕರಿಗೆ ಒಪ್ಪೊತ್ತಿನ ಊಟಕ್ಕೂ ತೊಂದರೆಯಾಗಿದೆ. ಹೀಗಾಗಿ ಕಾರ್ಮಿಕರಿಗೆ ದೈನಂದಿನ ದಿನಸಿ ಕಿಟ್ ನ್ನು ಕಾರ್ಮಿಕರ ಸಂಘದ ಮೂಲಕ ರಿಯಲ್ ಸ್ಟಾರ್ ಉಪೇಂದ್ರ ವಿತರಿಸಲಿದ್ದಾರೆ.

ಕೊರೋನಾದಿಂದಾಗಿ ಕೆಲಸವಿಲ್ಲದೇ ಸಂಕಷ್ಟದಲ್ಲಿರುವ ಚಿತ್ರರಂಗದ ಕಾರ್ಮಿಕರಿಗೆ ರಿಯಲ್ ಸ್ಟಾರ್ ಉಪೇಂದ್ರ ನೆರವಾಗಲು ಮುಂದೆ ಬಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಉಪೇಂದ್ರ ಅಗತ್ಯವಿದ್ದವರು ಕಾರ್ಮಿಕರ ಒಕ್ಕೂಟವನ್ನು ಸಂಪರ್ಕಿಸಿ ಎಂದಿದ್ದಾರೆ. ಅಷ್ಟೇ ಅಲ್ಲದೆ, ತಮಗೆ ದೇಣಿಗೆಯಾಗಿ ಬಂದ ಹಣವನ್ನು ಕಿರುತೆರೆ ಕಾರ್ಮಿಕರ ನೆರವಿಗೆ ಒದಗಿಸಲಿದ್ದಾರೆ.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್

satta king gali 91 club Hdhub4u Hdhub4u